ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ. ನಿಮ್ಮ ಮತವನ್ನು ನೀವೇ ಚಲಾಯಿಸಿ. ಇನ್ನೊಬ್ಬರ ಹೆಸರಿನಲ್ಲಿ ಮತದಾನ ಮಾಡುವುದು ಅಪರಾಧ ಮತ್ತು ಶಿಕ್ಷಾರ್ಹ.
ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ. ಪ್ರಜ್ಞಾವಂತಿಕೆಯಿಂದ ಮತ ಚಲಾಯಿಸಿ, ಸಮರ್ಥರನ್ನು ಆರಿಸಿ.
ನಿಮ್ಮ ಮತ ನಿಮ್ಮ ಹಕ್ಕು. ಪ್ರತಿಯೊಬ್ಬರು ನಿಮ್ಮ ಮತದಾನದ ಹಕ್ಕನ್ನು ಚಲಾಯಿಸಿ. ದೇಶದ ಸಂವಿಧಾನವನ್ನು ಗೌರವಿಸುವ, ಸಂರಕ್ಷಿಸುವ ನಾಯಕರನ್ನು ಆರಿಸಿ.
ಮತದಾನ ಸಂಭ್ರಮವಾದಾಗ ಮಾತ್ರ ದೇಶ ಬದಲಾಗುತ್ತದೆ.
ಬೇಸಿಗೆಯ ಹವಮಾನ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಸೂರ್ಯನ ತಾಪಮಾನ ಹೆಚ್ಚು ಇರುವುದರಿಂದ, ಗಾಳಿಯಲ್ಲಿನ ಮಾಲಿನ್ಯಕರ ಅಂಶವು ಮಕ್ಕಳಲ್ಲಿ ಆಯಾಸ, ಚರ್ಮದ ರೋಗ, ಬೆವರು ಸಾಲೆ, ನಿರ್ಜಲೀಕರಣ, ಉದರ ಸಮಸ್ಯೆ, ತಲೆ ನೋವು, ತಲೆ ಸುತ್ತುವ ಸಮಸ್ಯೆಗಳು ಹೆಚ್ಚಾಗಿ ಕಾಣಿಸುತ್ತವೆ. ಆದ್ದರಿಂದ ಅವರ ಜೀವಶೈಲಿಯತ್ತ ವಿಶೇಷ ಗಮನ ಹರಿಸಬೇಕು.
ಜನರ ಆರೋಗ್ಯದ ದೃಷ್ಟಿಯಿಂದ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿ ತಯಾರಿಕೆಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸುತ್ತಿದ್ದೇವೆ. ಇದನ್ನು ಉಲ್ಲಂಘಿಸಿದ್ದಲ್ಲಿ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡ ವಿಧಿಸಲಾಗುವುದು : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ 2024ರ ಜನವರಿ 1ರಿಂದ ಪೂರ್ವಾನ್ವಯ ಆಗುವಂತೆ ಗೌರವಧನ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.
2032ರ ವೇಳೆಗೆ ರಾಜ್ಯದ ಒಟ್ಟು ಆಂತರಿಕ ಉತ್ಪಾದನೆಯನ್ನು (ಜಿಎಸ್ಡಿಪಿ) ಒಂದು ಟ್ರಿಲಿಯನ್ ಡಾಲರ್ಗೆ (₹ 83 ಲಕ್ಷ ಕೋಟಿ) ಏರಿಸಲು ರಾಜ್ಯ ಸರ್ಕಾರವು ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಅಭಿವೃದ್ಧಿಗೆ ಒತ್ತು ನೀಡುತ್ತಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಸಿವಿಲ್ ವ್ಯಾಜ್ಯಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಂಡು 6 ತಿಂಗಳಲ್ಲಿ ಇತ್ಯರ್ಥಗೊಳಿಸುವ ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಕಾಯ್ದೆ ಸೋಮವಾರದಿಂದ ಜಾರಿಯಾಗಿದೆ.
ಕೆಳ ಹಂತದ ನ್ಯಾಯಾಲಯಗಳಿಂದ ಹಿಡಿದು ಹೈಕೋರ್ಟ್ವರೆಗಿನ ಎಲ್ಲ ನ್ಯಾಯಾಲಯಗಳಿಗೂ ಈ ಕಾಯ್ದೆ ಅನ್ವಯವಾಗುತ್ತದೆ : ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ
ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿಯು ಒಂದು. ಈ ಯೋಜನೆಯನ್ವಯ ಪ್ರತಿ ಮನೆಗೆ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ಗೃಹಜ್ಯೋತಿ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದೆ.
ಕರ್ನಾಟಕ ಚಲನಚಿತ್ರ ಅಕಾಡೆಮಿ ಇದೇ 29 ರಿಂದ ಮಾರ್ಚ್ 7ರವರೆಗೆ ಹಮ್ಮಿಕೊಂಡಿರುವ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಡಾಲಿ ಧನಂಜಯ ಅವರನ್ನು ನೇಮಿಸಲಾಗಿದೆ.
15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭವು ಇಂದು ಸಂಜೆ 5 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಿದೆ. ಆಯೋಗದ ಅಂತಿಮ ವರದಿ ಬಂದ ನಂತರ ಖಂಡಿತ ಜಾರಿ ಮಾಡುತ್ತೇವೆ. ಈ ಬಗ್ಗೆ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನೌಕರರಿಗೆ ಅಭಯ ನೀಡಿದ್ದಾರೆ.