Ramalinga Reddy

6.5K posts

Ramalinga Reddy banner
Ramalinga Reddy

Ramalinga Reddy

@RLR_BTM

Transport & Muzrai Minister, Karnataka | Incharge Minister - Bengaluru South District (Ramanagara) | MLA - BTM Layout |

Karnataka Katılım Eylül 2016
25 Takip Edilen79.2K Takipçiler
Ramalinga Reddy
Ramalinga Reddy@RLR_BTM·
ಭಾರತದ ಇತಿಹಾಸದಲ್ಲೇ ಹಿಂದೆಂದೂ ಕಾಣದ ರೀತಿಯಲ್ಲಿ ಕಳೆದ 10 ದಿನಗಳಲ್ಲಿ ಡೀಸೆಲ್ ಬೆಲೆ ಭೀಕರವಾಗಿ ₹7.81 ಹೆಚ್ಚಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಅಂತರರಾಷ್ಟ್ರೀಯ ರಾಜತಾಂತ್ರಿಕತೆಯ ಘೋರ ವೈಫಲ್ಯಕ್ಕೆ ಸಾಕ್ಷಿ. 🔺ಇದರ ಪರಿಣಾಮ ಕರ್ನಾಟಕ ರಾಜ್ಯ ಸಾರಿಗೆಗೆ ಬೀಳುತ್ತಿರುವ ಹೆಚ್ಚುವರಿ ಹೊರೆ: ತಿಂಗಳಿಗೆ: ₹40 ಕೋಟಿ ವರ್ಷಕ್ಕೆ: ₹480 ಕೋಟಿ ಜಾಗತಿಕ ತೈಲ ಬಿಕ್ಕಟ್ಟು ನಿರ್ವಹಣೆಯಲ್ಲಿ ಕೇಂದ್ರದ ವಿಫಲತೆಯು ಸಾಮಾನ್ಯ ಜನರಿಗೆ ಉಚಿತ ಹಾಗೂ ಕೈಗೆಟುಕುವ ಸಾರಿಗೆ ನೀಡುತ್ತಿರುವ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯ ಸರ್ಕಾರಗಳನ್ನು ಆರ್ಥಿಕವಾಗಿ ಕಂಗಾಲು ಮಾಡಿದೆ. 🔺ಈ ದರ ಏರಿಕೆ ಕೇವಲ ಬಸ್ಸುಗಳಿಗಷ್ಟೇ ಸೀಮಿತವಾಗಿಲ್ಲ. ಇಡೀ ದೇಶದ ಸರಕು ಸಾಗಣೆಯ ಬೆನ್ನೆಲುಬಾಗಿರುವ ಸಾರಿಗೆ ಲಾರಿಗಳ (Transport Lorries) ಮೇಲೂ ಇದು ಮಾರಕ ಹೊರೆ ಉಂಟುಮಾಡಿದೆ. ಲಾರಿ ಬಾಡಿಗೆಗಳು ಗಗನಕ್ಕೇರುತ್ತಿರುವುದರಿಂದ ತರಕಾರಿ, ಹಾಲು, ದಿನಸಿ ಸೇರಿದಂತೆ ನಿತ್ಯೋಪಯೋಗಿ ವಸ್ತುಗಳ ಬೆಲೆಗಳು (Daily Goods Price) ಕೂಡಾ ತೀವ್ರವಾಗಿ ಏರಿಕೆಯಾಗಲಿವೆ. ಇತ್ತೀಚಿನ ಪಂಚ ರಾಜ್ಯಗಳ ಚುನಾವಣೆ ವೇಳೆ ತೈಲ ಬೆಲೆ ಏರಲ್ಲ ಎಂದು ಸುಳ್ಳು ಹೇಳಿ ಮತ ಪಡೆದ ಬಿಜೆಪಿ ನಾಯಕರು ಮತ್ತು ಕೇಂದ್ರ ಸಚಿವರು ಈಗ ಉತ್ತರಿಸಲಾಗದೆ ಮೌನಕ್ಕೆ ಶರಣಾಗಿದ್ದಾರೆ. ವಿಶ್ವಗುರು ಎಂದು ಸ್ವಯಂ ಘೋಷಿಸಿಕೊಂಡವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸೂಕ್ತ ರಿಯಾಯಿತಿ ದರದಲ್ಲಿ ಇಂಧನ ತರಲು ವಿಫಲರಾಗಿ, ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸುತ್ತಿದ್ದಾರೆ. ಪ್ರಧಾನಿ ಮೋದಿಯವರೇ, ಈ ಕೂಡಲೇ ಈ ಜನವಿರೋಧಿ "ಪೆಟ್ರೋಲ್-ಡೀಸೆಲ್ ದರ ಏರಿಕೆ"ಯನ್ನು ಹಿಂಪಡೆಯಿರಿ. ಇಲ್ಲದಿದ್ದರೆ ದೇಶದ ರೈತರು, ಲಾರಿ ಚಾಲಕರು ಹಾಗೂ ಜನಸಾಮಾನ್ಯರು ಒಟ್ಟಾಗಿ ನಿಮಗೆ ತಕ್ಕ ಪಾಠ ಕಲಿಸಲಿದ್ದಾರೆ. #RamalingaReddy #ModiDiplomacyFailure #DieselPriceHike #KSRTC #BMTC #KKRTC #NWKRTC #NarendraModi @narendramodi
Ramalinga Reddy tweet media
ಕನ್ನಡ
8
1
8
517
Ramalinga Reddy
Ramalinga Reddy@RLR_BTM·
@BJP4Karnataka ಯವರೇ, ತಮ್ಮ ಟ್ವೀಟ್ ನೋಡಿದರೆ ನಗಬೇಕೋ ಅಥವಾ ಅನುಕಂಪ ವ್ಯಕ್ತಪಡಿಸಬೇಕೋ ??? ತಮ್ಮ‌ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ರವರ ಪೂಜ್ಯ ತಂದೆಯವರಾದ ಶ್ರೀ @BSYBJP ರವರ ಮತ್ತು ಅವರ ಶಿಷ್ಯತ್ತೋಮರಾದ ಶ್ರೀ @BSBommai ರವರ ಆಡಳಿತದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 2 ವರ್ಷದ ಅಂಕಿ ಅಂಶ 2021-22, 2022-23 ರನ್ನು ಮಾತ್ರ ತಮ್ಮ ಗಮನಕ್ಕೆ ತರುತ್ತಿದ್ದೇನೆ.‌ ಇನ್ನು‌ ತಮ್ಮ ಆಡಳಿತ ಅವಧಿಯ 5 ವರ್ಷದ ಅಂಕಿ ಅಂಶ ಬಗ್ಗೆ ತಮಗೆ ಮಾಹಿತಿ ನೀಡಿದರೆ, ತಾವು ಮುಖ ಮುಚ್ಚಿಕೊಂಡು ಓಡಾಡುವುದಕ್ಕು ಸಾಧ್ಯವಾಗದಂತಹ ಸ್ಥಿತಿಗೆ ತಮ್ಮನ್ನು ತಳ್ಳುವಂತಾಗುತ್ತದೆಯಲ್ಲ ಎಂಬ ಸಹಾನುಭೂತಿಯೊಂದಿಗೆ .. 🔺 ತಮ್ಮ‌ ಅವಧಿಯಲ್ಲಿ‌ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ 2021-22 ಮತ್ತು 2022-23 ರಲ್ಲಿ ಶೂನ್ಯ (ZERO) ಬಸ್ಸುಗಳ ಸೇರ್ಪಡೆ ಯಾಗಿದೆ. 🔺 ಇದೇ ಅವಧಿಯಲ್ಲಿ *ಶೂನ್ಯ ನೇಮಕಾತಿ* ✅ ನಮ್ಮ ಅವಧಿಯಲ್ಲಿ ಬಸ್ಸುಗಳ ಸೇರ್ಪಡೆ ಮತ್ತು ನೇಮಕಾತಿ ವಿವರ ಲಗತ್ತಿಸಿದೆ. ತಾವು ತಮ್ಮ ಅಮೂಲ್ಯ ಸಮಯವನ್ನು‌ ತೆಗದುಕೊಂಡು ನೋಡಿ, ಓದಿ,‌ ಅರ್ಥ ಮಾಡಿಕೊಳ್ಳಿ, ಅರ್ಥವಾಗದಿದ್ದರೆ ಮತ್ತೊಮ್ಮೆ ಟ್ಟೀಟ್ ಮಾಡಿ ,ಮತ್ತಷ್ಟು ಸವಿವರವಾಗಿ ತಿಳಿಸುತ್ತೇನೆ. ನಿಮ್ಮ‌ ಬಿ.ಜೆ.ಪಿ‌ ಪಕ್ಷದವರನ್ನು ನೋಡಿದರೆ ಅಯ್ಯೋ ಅನ್ನಿಸುತ್ತೆ. ಕೈ ತೋರಿಸಿ ಅವಲಕ್ಷಣ ಅನ್ನೋದಕ್ಕೆ ಅತ್ಯುತ್ತಮವಾದ ಉದಾಹರಣೆ ನೀವು. #RamalingaReddy #Congress #BJP #Vijayendra #Yediyurappa #Bommai #KKRTC @INCKarnataka @siddaramaiah
Ramalinga Reddy tweet media
ಕನ್ನಡ
1
4
19
1K
Ramalinga Reddy
Ramalinga Reddy@RLR_BTM·
ಮಾನ್ಯ ಶ್ರೀ @RAshokaBJP ‌ರವರೇ, ತಾವು ಟ್ಟೀಟ್ ಮಾಡಿದರೆ ಮಾತ್ರ ವಿರೋಧ ಪಕ್ಷದ ನಾಯಕರು ಎಂದು ಗುರುತಿಸುತ್ತಾರೆ ಎಂ‌ಬ ಕಲ್ಪನಾ ಲೋಕದಿಂದ ಹೊರ ಬನ್ನಿ.. ಕಾರ್ಮಿಕ ಸಂಘಟನೆಗಳ ಬೇಡಿಕೆಗೆ ಸ್ಪಂದಿಸುವ ನಿಟ್ಟಿನಲ್ಲಿ ನಾವು ಅವರೊಡನೆ 11 ಬಾರಿ ಸಭೆಗಳನ್ನು ನಡೆಸಿದ್ದೇವೆ. 🔺 ಸಾರಿಗೆ ನೌಕರರಿಗೆ 12.5 % ವೇತನ‌ ಪರಿಷ್ಕರಣೆ ಮಾಡಿ ಸರ್ಕಾರವು ಆದೇಶ ಹೊರಡಿಸಿದೆ. ನಾಲ್ಕು ಸಾರಿಗೆ ನಿಗಮಗಳಿಗೆ ಪ್ರತಿ ತಿಂಗಳು ರೂ72.80 ಕೋಟಿ, ಪ್ರತಿ ವರ್ಷ ರೂ.873.64 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ. 🔺 ಈಗಾಗಲೇ ತಮ್ಮ ಪಕ್ಷದ ಆಡಳಿತದ ಅವಧಿಯ 2023 ರ ಮಾರ್ಚ್‌ ನ ವೇತನ ಪರಿಷ್ಕರಣೆಯ 26 ತಿಂಗಳ ಹಿಂಬಾಕಿ ಮೊತ್ತ ರೂ. 1271.92 ಕೋಟಿಗಳಲ್ಲಿ ಮೊದಲ ಕಂತಿನ ಹಣ ರೂ. 450 ಕೋಟಿಯನ್ನು ಸರ್ಕಾರವು ಬಿಡುಗಡೆ ಮಾಡಿದ್ದು, ನೌಕರರ ಖಾತೆಗಳಿಗೆ ಜಮಾ ಮಾಡಲಾಗಿದೆ. 🔺 ನಾನು ಈಗಾಗಲೇ ತಮ್ಮ ಮತ್ತು ತಮ್ಮ ಪಕ್ಷದ ಆಡಳಿತ ಅವಧಿಯ ಮಾಹಿತಿಯನ್ನು‌ ಅಂಕಿಅಂಶ‌ ಸಮೇತ ನೀಡಿರುವುದನ್ನು ಅವಗಾಹಿಸಿ. ಆದರೂ‌ ಮತ್ತೊಮ್ಮೆ ಈ ಎಲ್ಲಾ ಮಾಹಿತಿಗಳನ್ನು ನೀಡಲಾಗುತ್ತಿದೆ. 🔺 ತಾವು ಸಾರಿಗೆ ಮಂತ್ರಿಯಾಗಿದ್ದಾಗಲೇ ಮೊದಲ ಬಾರಿಗೆ ವೇತನ ಪರಿಷ್ಕರಣೆಗಾಗಿ ಮುಷ್ಕರ ಹೂಡುವ ಪದ್ಧತಿ ಪ್ರಾರಂಭವಾಗಿದ್ದು. ಮುಷ್ಕರದ ಅವಧಿ ದಿನಾಂಕ: 13-09-2012 ಮತ್ತು 14-09-2012 🔺 ತಾವು ಸಾರಿಗೆ ಮಂತ್ರಿಗಳಾಗಿದ್ದಾಗ ನೌಕರರ ಸಂಘಟನೆಗಳು 35% ವೇತನ‌ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದವು, ತಾವು 10% ವೇತನ ಪರಿಷ್ಕರಣೆ ಮಾಡಿದ್ದೀರಿ ಎಂಬುದು ತಿಳಿದಿದಿಯೇ? 🔺 ತಮ್ಮದೇ ಬಿ.ಜೆ.ಪಿ ಪಕ್ಷದ ಆಡಳಿತ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳ‌ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ ಕಾಲ‌ ಮುಷ್ಕರ ನಡೆದಿದ್ದು. ಎರಡೆರಡು ಬಾರಿ‌ ಮುಷ್ಕರ ನಡೆದದ್ದು. ದಿನಾಂಕ: 11-12-2020 ರಿಂದ 14-12-2020 ( ನಾಲ್ಕು ದಿವಸ) ಮತ್ತು 07-04-2021 ರಿಂದ 21-04-2021 ( ಹದಿನೈದು ದಿವಸ). 🔺 ತಮ್ಮ ಪಕ್ಷ ದ ಅವಧಿಯಲ್ಲಿ ಮುಷ್ಕರದ ಹೆಸರಿನಲ್ಲಿ ಸರಿಸುಮಾರು 3500 ನೌಕರರನ್ನು‌ ಕೆಲಸದಿಂದ ವಜಾ, ಅಮಾನತು ಮಾಡಿ FIR ಹಾಕಿಸಿ,‌ ಇಂದಿಗೂ ಅವರು ಕೋರ್ಟ್ ಕಛೇರಿ ಅಲೆಯುತ್ತಿದ್ದಾರೆ. 🔺 ತಮ್ಮದೇ ಬಿ.ಜೆ.ಪಿ ಸರ್ಕಾರವಿದ್ದಾಗ ಮಾರ್ಚಿ-2023 ರಲ್ಲಿ ಸಾರಿಗೆ ಸಂಸ್ಥೆಗಳ ನೌಕರರ ವೇತನ ಪರಿಷ್ಕರಣೆ ಮಾಡಿ, 38 ತಿಂಗಳ ಹಿಂಬಾಕಿ ವೇತನ ಪಾವತಿ ಬಾಕಿಯಿಟ್ಟು, ಈ ಸಂಬಂಧ ಬಜೆಟ್‌ನಲ್ಲಿ ಯಾವುದೇ ಅನುದಾನವನ್ನು ಮೀಸಲಿಡದೆ ತಪ್ಪಾದ ಸರ್ಕಾರಿ ಆದೇಶ ಹೊರಡಿಸಿರುವುದೇ ಈ ಎಲ್ಲಾ ತೊಡಕುಗಳಿಗೆ ಮೂಲ ಕಾರಣವಾಗಿದೆ. 🔺 ತಮ್ಮ ಬಿ.ಜೆ.ಪಿ ಆಡಳಿತ ಅವಧಿಯಲ್ಲಿ ನೀಡಬೇಕಾಗಿದ್ದ ನಿವೃತ್ತ ನೌಕರರ ವೇತನ ಪರಿಷ್ಕರಣೆ ಉಪಧನ ಬಾಕಿ ಮೊತ್ತ ರೂ.224 ಕೋಟಿ ಗಳಿಗೂ ಸಹ ಯಾವುದೇ ಅನುದಾನವನ್ನು ಮೀಸಲಿಡದೆ ಇದ್ದಾಗ್ಯೂ ಸಹ ನಮ್ಮ ಸರ್ಕಾರವು 2025 ರಲ್ಲಿ ಹಣ ಬಿಡುಗಡೆಗೊಳಿಸಿದೆ. 🔺 ನಾಲ್ಕು ಸಾರಿಗೆ ಸಂಸ್ಥೆಗಳ ಬಾಕಿ ಹೊಣೆಗಾರಿಕೆ 31.03.2026 ರಂತೆ ರೂ. 7130.80 ಕೋಟಿ (ಇದರಲ್ಲಿ ರೂ. 2298.20 ಕೋಟಿ ನೌಕರರ ಭವಿಷ್ಯ ನಿಧಿ ಬಾಕಿ ಮತ್ತು ರೂ.822.26 ಕೋಟಿ ಇಂಧನ ಪಾವತಿ ಬಾಕಿ) 🔺 ತಮ್ಮ ಬಿ.ಜಿ.ಪಿ ಆಡಳಿತ ಅವಧಿಯ ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್‌ ಬಾಕಿ ಹಣ ಪಾವತಿಗಾಗಿ, 2025ರಲ್ಲಿ ನಮ್ಮ ಸರ್ಕಾರವು ಬ್ಯಾಂಕ್‌ನಿಂದ ರೂ.2000 ಕೋಟಿ ಸಾಲವನ್ನು ಪಡೆಯಲು ಸಾರಿಗೆ ಸಂಸ್ಥೆಗಳಿಗೆ ಅನುಮತಿಸಿದ್ದು, ಈ ಸಾಲದ ಅಸಲು ಮತ್ತು ಬಡ್ಡಿಯನ್ನು ನಮ್ಮ ಸರ್ಕಾರವು ಪಾವತಿಸುತ್ತಿದೆ. ಸಾರಿಗೆ ನೌಕರರ ಬಗ್ಗೆ ಈ ಅನುಕಂಪದ ಮಾತನ್ನು ಆಡಲು ನಿಮಗೆ ಯಾವ ನೈತಿಕತೆ ಇದೆ? #RamalingaReddy #KSRTC #BMTC #KKRTC #NWKRTC
R. Ashoka@RAshokaBJP

ಶಕ್ತಿ ಯೋಜನೆಯ ಹೊರೆದಿಂದ ನಿಶ್ಯಕ್ತಗೊಂಡಿರುವ ರಾಜ್ಯದ ಸಾರಿಗೆ ನಿಗಮಗಳು ಇಂದು ಸಂಪೂರ್ಣ ಕುಸಿತದ ಅಂಚಿಗೆ ತಲುಪಿವೆ. ಮೇ 20ರಿಂದ ಮತ್ತೊಮ್ಮೆ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿರುವುದು @INCKarnataka ಸರ್ಕಾರದ ದಿವಾಳಿತನದ ಆಡಳಿತಕ್ಕೆ ಜೀವಂತ ಸಾಕ್ಷಿ. ಶೇ 25ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದ ನೌಕರರಿಗೆ, ಏಕಪಕ್ಷೀಯವಾಗಿ ಕೇವಲ 12.5% ಹೆಚ್ಚಳ ಘೋಷಿಸಿರುವುದು ನೌಕರರ ಹೋರಾಟಕ್ಕೆ ಮಾಡಿದ ಅವಮಾನ. ಕೇವಲ ಚುನಾವಣಾ ಲಾಭಕ್ಕಾಗಿ ಗ್ಯಾರೆಂಟಿಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸ ಖಾಲಿ ಮಾಡಿದ @siddaramaiah ಸರ್ಕಾರಕ್ಕೆ, ಈಗ ನೌಕರರ ಸಂಬಳಕ್ಕೂ ಹಣವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ಸಚಿವ @RLR_BTM ಅವರು ನೌಕರರ ಸಂಕಷ್ಟಗಳಿಗೆ ಸ್ಪಂದಿಸುವ ಬದಲು ದಿವ್ಯ ಮೌನ ವಹಿಸಿರುವುದು ಸರ್ಕಾರದ ನಿರ್ಲಕ್ಷ್ಯ ಮತ್ತು ಅಸಮರ್ಥತೆಯ ಪರಾಕಾಷ್ಠೆ. ಸಾರಿಗೆ ನೌಕರರು ಪದೇ ಪದೇ ಬೀದಿಗಿಳಿದರೂ Dont Care ಎನ್ನದಿರುವ ಕಾಂಗ್ರೆಸ್ ಸರ್ಕಾರ ತನ್ನ ಕಾರ್ಮಿಕ ವಿರೋಧಿ ಧೋರಣೆಯನ್ನ ಈಗಾಗಲೇ ಅನೇಕ ಸಲ ಪ್ರದರ್ಶನ ಮಾಡಿದೆ. ಈಗ ನೌಕರರ ಮುಷ್ಕರದಿಂದ ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯೇ ಬುಡಮೇಲು ಆಗುತ್ತಿದ್ದರೂ ಕ್ಯಾರೆ ಅನ್ನದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ಕೈಗೊಂಡು ನೌಕರರನ್ನು ಕೆರಳಿಸುತ್ತಿರುವುದು ಕನ್ನಡಿಗರ ದುರಂತ.

ಕನ್ನಡ
7
12
41
3K
Ramalinga Reddy
Ramalinga Reddy@RLR_BTM·
ನಮ್ಮ ಕನ್ನಡ ನಾಡಿಗೆ ಭೇಟಿ ನೀಡಿದ ಮಾನ್ಯ ಪ್ರಧಾನಮಂತ್ರಿ @narendramodi ಯವರು, ಕಳೆದ 12 ವರ್ಷಗಳಲ್ಲಿ ತಮ್ಮ ಆಡಳಿತದಿಂದ 6.5 ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯದ ಬಗ್ಗೆ ಮಾತನಾಡುವ ಬದಲು, ಕೇವಲ "ಕುರ್ಚಿ" ರಾಜಕಾರಣದ ಬಗ್ಗೆ ಮಾತನಾಡಿರುವುದು ದುರದೃಷ್ಟಕರ. ನಮ್ಮ ಆಂತರಿಕ ಪ್ರಜಾಪ್ರಭುತ್ವವನ್ನು ಪ್ರಧಾನಿಗಳು ಟೀಕಿಸುವ ಮೊದಲು ಕನ್ನಡಿಗರು ಕೇಳುತ್ತಿರುವ ಪ್ರಶ್ನೆ ಇದು: 🔺ಭಾರತದ 2ನೇ ಅತಿದೊಡ್ಡ ಜಿಎಸ್‌ಟಿ (GST) ಪಾವತಿದಾರ ರಾಜ್ಯವಾದ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಕೊಟ್ಟಿದ್ದೇನು? 📉 ತೆರಿಗೆ ಹಂಚಿಕೆಯಲ್ಲಿ ಅನ್ಯಾಯ: ಕರ್ನಾಟಕವು ಭಾರತದ ಆರ್ಥಿಕತೆಯ ಎಂಜಿನ್ ಆಗಿದ್ದುಕೊಂಡು 2025-26ರಲ್ಲಿ ₹1.58 ಲಕ್ಷ ಕೋಟಿಗೂ ಹೆಚ್ಚು ಜಿಎಸ್‌ಟಿ ಒಳಗೊಂಡಂತೆ ಒಟ್ಟು ₹4.5 ಲಕ್ಷ ಕೋಟಿ ವಿವಿಧ ರೂಪದಲ್ಲಿ ತೆರಿಗೆ ಸಂಗ್ರಹಿಸಿದೆ. ಆದರೆ ಕೇಂದ್ರದಿಂದ ನಮಗೆ ಮರಳಿ ಬರುತ್ತಿರುವುದು ಕೇವಲ ಬಿಡಿಗಾಸು. 🔺ಕರ್ನಾಟಕವು ಕೇಂದ್ರಕ್ಕೆ ನೀಡುವ ಪ್ರತಿ 100 ರೂಪಾಯಿಯಲ್ಲಿ ನಮಗೆ ಮರಳಿ ಸಿಗುತ್ತಿರುವುದು ₹13ಕ್ಕಿಂತ ಕಡಿಮೆ. ನಮ್ಮ ಶ್ರಮದ ಹಣ ಎಲ್ಲಿಗೆ ಹೋಗುತ್ತಿದೆ ಮೋದಿ ಅವರೇ? 🔺 12 ವರ್ಷಗಳ ಸುಳ್ಳು ಭರವಸೆಗಳು ಮತ್ತು ಬಾಕಿ ಉಳಿದಿರುವ ಯೋಜನೆಗಳು : 2014 ರಿಂದ, ಕರ್ನಾಟಕದ ಜನತೆಯ ಜೀವನಾಡಿ ಯೋಜನೆಗಳು ದೆಹಲಿಯಲ್ಲಿ ಧೂಳು ಹಿಡಿಯುತ್ತಿವೆ. 🔺 ಕರ್ನಾಟಕದಿಂದ ದಾಖಲೆ ಸಂಖ್ಯೆಯ ಬಿಜೆಪಿ ಸಂಸದರನ್ನು ಕಳುಹಿಸಿದರೂ ನಮಗೆ ಸಿಕ್ಕಿದ್ದು ಶೂನ್ಯ. 🔺 ಮೇಕೆದಾಟು ಯೋಜನೆ: ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನೀಡುವ ಈ ಯೋಜನೆಗೆ ವರ್ಷಗಳಿಂದ ಪರಿಸರ ಅನುಮತಿ ನೀಡದೆ ಕೇಂದ್ರ ಸರ್ಕಾರ ಸತಾಯಿಸುತ್ತಿದೆ. 🔺ಭದ್ರಾ ಮೇಲ್ದಂಡೆ ಯೋಜನೆ: ಕೇಂದ್ರ ಬಜೆಟ್‌ನಲ್ಲಿ ₹5,300 ಕೋಟಿ ಘೋಷಿಸಿ "ರಾಷ್ಟ್ರೀಯ ಯೋಜನೆ" ಎಂದು ಬೆನ್ನು ತಟ್ಟಿಕೊಂಡಿದ್ದ ಕೇಂದ್ರ ಸರ್ಕಾರ, ಈವರೆಗೆ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ. 🔺 ಮಹದಾಯಿ (ಕಳಸಾ-ಬಂಡೂರಿ): ಗೆಜೆಟ್ ನೋಟಿಫಿಕೇಶನ್ ಮತ್ತು ಅರಣ್ಯ ಅನುಮತಿ ನೀಡುವಲ್ಲಿ ವಿನಾಕಾರಣ ವಿಳಂಬ ಮಾಡಲಾಗುತ್ತಿದೆ. 🔺 ಬೆಂಗಳೂರು ಸಬ್ ಅರ್ಬನ್ ರೈಲು: ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ಈ ಯೋಜನೆಗೆ ನಿರಂತರವಾಗಿ ಅನುದಾನದ ಕೊರತೆ ಎದುರಾಗುತ್ತಿದೆ. 🔺 ಕೃಷಿ ಮತ್ತು ಬರ / ಪ್ರವಾಹ ಪರಿಹಾರ: ನಮ್ಮ ರೈತರು ಸಂಕಷ್ಟದಲ್ಲಿದ್ದಾಗ ಮಲತಾಯಿ ಧೋರಣೆ ತೋರಿದ ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿತ್ತು. ಕರ್ನಾಟಕವು ಇತ್ತೀಚೆಗೆ ಭೀಕರ ಬರಗಾಲ ಎದುರಿಸಿದಾಗ ನಾವು ₹18,000 ಕೋಟಿಗೂ ಅಧಿಕ ಎನ್‌ಡಿಆರ್‌ಎಫ್ (NDRF) ಪರಿಹಾರ ಕೋರಿದ್ದೆವು. ಆದರೆ ಸುಪ್ರೀಂ ಕೋರ್ಟ್ ಚೀಮಾರಿ ಹಾಕುವವರೆಗೂ ಕೇಂದ್ರವು ಪರಿಹಾರ ಬಿಡುಗಡೆ ಮಾಡಲಿಲ್ಲ. 🔺 ಅನ್ನಭಾಗ್ಯಕ್ಕೆ ಅಡ್ಡಿ: ನಾವು ಬಡವರಿಗೆ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಾಗ, ಕೇಂದ್ರ ಸರ್ಕಾರವು ಎಫ್‌ಸಿಐ (FCI) ಮೂಲಕ ರಾಜ್ಯಕ್ಕೆ ಅಕ್ಕಿ ಮಾರಾಟ ಮಾಡದಂತೆ ತಡೆಹಿಡಿದು ಬಡವರ ಹೊಟ್ಟೆ ಮೇಲೆ ಹೊಡೆಯಿತು. 🔺 ನನೆಗುದಿಗೆ ಬಿದ್ದ ಮೂಲಸೌಕರ್ಯ ಯೋಜನೆಗಳು: 🔺 ರಾಯಚೂರಿನಲ್ಲಿ ಘೋಷಿತ AIIMS (ಏಮ್ಸ್) ಆಸ್ಪತ್ರೆ ಎಲ್ಲಿದೆ? 🔺 ರಾಜ್ಯ ಸರ್ಕಾರ ಸುಮಾರು 1,100 ಎಕರೆ ಭೂಮಿ ನೀಡಿದರೂ ರೈಲ್ವೆ ಕೋಚ್ ಕಾರ್ಖಾನೆ ಏಕಾಗಲಿಲ್ಲ? 🔺ಚುನಾವಣೆ ನಡೆಯುವ ರಾಜ್ಯಗಳಿಗೆ ನೀಡುವ ಆದ್ಯತೆ ನಮ್ಮ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಏಕೆ ಸಿಗುತ್ತಿಲ್ಲ? ಪ್ರಧಾನಮಂತ್ರಿಯವರೇ, ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ. ಆದರೆ ಕರ್ನಾಟಕದ ಬಗ್ಗೆ ನಿಮ್ಮ 'ಉದ್ದೇಶ' ಮಾತ್ರ ಅಲುಗಾಡುತ್ತಿದೆ. ಕೇವಲ ಭಾಷಣ ಮಾಡಲು ಬೆಂಗಳೂರಿಗೆ ಬಂದರೆ ಉಪಯೋಗವಿಲ್ಲ; ನಮ್ಮ ರಾಜ್ಯಕ್ಕೆ ಬರಬೇಕಾದ ನ್ಯಾಯಯುತವಾದ ಅನುದಾನ ಮತ್ತು ಯೋಜನೆಗಳ ಅನುಮತಿಯೊಂದಿಗೆ ಬಂದರೆ ಸ್ವಾಗತಿಸುತ್ತೇವೆ. #RamalingaReddy #NarendraModi #Karnataka #Siddaramaiah #DKShivakumar #ನಮ್ಮತೆರಿಗೆನಮ್ಮಹಕ್ಕು #ಕನ್ನಡಸ್ವಾಭಿಮಾನ #ಕನ್ನಡಿಗರಪ್ರಶ್ನೆ
Ramalinga Reddy tweet media
ಕನ್ನಡ
2
2
14
788
Ramalinga Reddy
Ramalinga Reddy@RLR_BTM·
ಆತ್ಮೀಯರಾದ ಸಚಿವ ಶ್ರೀ ಡಿ. ಸುಧಾಕರ್ ಅವರು ಇಂದು ನಮ್ಮನ್ನು ಅಗಲಿರುವುದು ತೀವ್ರ ನೋವು ತಂದಿದೆ. ಜನಸಾಮಾನ್ಯರ ಧ್ವನಿಯಾಗಿ ಅವರು ಸಲ್ಲಿಸಿದ ಸೇವೆ ಎಂದಿಗೂ ಸ್ಮರಣೀಯ. ಅವರ ಅಗಲಿಕೆ ನಮ್ಮ ಪಕ್ಷಕ್ಕೆ ಮತ್ತು ನಾಡಿಗೆ ತುಂಬಲಾರದ ನಷ್ಟ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರು, ಅಭಿಮಾನಿಗಳು ಮತ್ತು ಅಪಾರ ಕಾರ್ಯಕರ್ತರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. #DSudhakar #RamalingaReddy
Ramalinga Reddy tweet media
ಕನ್ನಡ
2
1
5
343
Ramalinga Reddy
Ramalinga Reddy@RLR_BTM·
ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ನೂತನವಾಗಿ ಶಾಸಕರಾಗಿ ಆಯ್ಕೆಯಾದ ಸಮರ್ಥ್ ಮಲ್ಲಿಕಾರ್ಜುನ್ ಅವರು ನನ್ನನು ಭೇಟಿಯಾದ ಕ್ಷಣ. ಈ ಸಂದರ್ಭದಲ್ಲಿ ಅವರಿಗೆ ಶುಭ ಹಾರೈಸುತ್ತಾ, ದಿ|| ಶ್ರೀ ಶಾಮನೂರು ಶಿವಶಂಕರಪ್ಪನವರು ಹಾಕಿಕೊಟ್ಟ ಜನಪರ ಸೇವೆಯ ಹಾದಿಯಲ್ಲಿ ಮುನ್ನಡೆದು, ಸಮಾಜದ ಏಳಿಗೆಗಾಗಿ ಶ್ರಮಿಸಲಿ ಎಂದು ಆಶಿಸಿದೆನು. ದಾವಣಗೆರೆ ಸಂಸದರಾದ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಈ ಸಂದರ್ಭದಲ್ಲಿ ಹಾಜರಿದ್ದರು. #Davangere #RamalingaReddy #SamarthMallikarjun @DrPrabhaSSM
Ramalinga Reddy tweet media
ಕನ್ನಡ
5
2
36
687
Ramalinga Reddy
Ramalinga Reddy@RLR_BTM·
ಬಾಗಲಕೋಟೆಯ ನೂತನ ಶಾಸಕರಾದ ಶ್ರೀ ಉಮೇಶ್ ಮೇಟಿ ಅವರು ಕೆ.ಎಸ್.ಆರ್.ಟಿ.ಸಿ ಕೇಂದ್ರ ಕಚೇರಿಯಲ್ಲಿ ನನ್ನನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು. ತಮ್ಮ ಕ್ಷೇತ್ರದ ಜನರ ಏಳಿಗೆಗಾಗಿ ಅವರು ಉತ್ತಮ ಸೇವೆಯನ್ನು ಸಲ್ಲಿಸಲಿ ಎಂದು ಈ ಸಂದರ್ಭದಲ್ಲಿ ಅವರಿಗೆ ಹಾರೈಸಿ, ಶುಭ ಕೋರಿದೆ. ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ರೆಡ್ಡಿ ಹಾಗೂ ಇತರ ಪ್ರಮುಖ ನಾಯಕರು ಉಪಸ್ಥಿತರಿದ್ದರು. #RamalingaReddy #Bagalkot #UmeshMeti #Congress
Ramalinga Reddy tweet mediaRamalinga Reddy tweet mediaRamalinga Reddy tweet media
ಕನ್ನಡ
2
2
56
1.8K
Ramalinga Reddy
Ramalinga Reddy@RLR_BTM·
Remembering the architect of modern Karnataka and our first Chief Minister, Sri K.C. Reddy, on his birth anniversary. His vision for a democratic and progressive state continues to inspire us today. #KCReddy #Karnataka #RamalingaReddy
Ramalinga Reddy tweet media
English
2
3
15
567
Ramalinga Reddy
Ramalinga Reddy@RLR_BTM·
ಆನೇಕಲ್ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (RTO) ಕಚೇರಿ ಮತ್ತು ಜಪ್ತಿ ಮಾಡಿದ ವಾಹನಗಳ ನಿಲುಗಡೆ ಸ್ಥಳದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು. ಈ ಭಾಗದ ನಾಗರಿಕರಿಗೆ ಸಾರಿಗೆ ಇಲಾಖೆಯ ಸೇವೆಗಳು ಇನ್ನು ಮುಂದೆ ಸುಲಭವಾಗಿ ಮತ್ತು ತ್ವರಿತವಾಗಿ ಲಭ್ಯವಾಗಲಿವೆ. ಆನೇಕಲ್ ಶಾಸಕರಾದ ಶ್ರೀ ಬಿ. ಶಿವಣ್ಣ ಅವರು ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಮ್ಮ ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸದಾ ಬದ್ಧವಾಗಿದೆ. #RamalingaReddy #Anekal #Chandapura #RTO #Development #Karnataka
Ramalinga Reddy tweet mediaRamalinga Reddy tweet mediaRamalinga Reddy tweet mediaRamalinga Reddy tweet media
ಕನ್ನಡ
0
3
19
1.5K
Ramalinga Reddy
Ramalinga Reddy@RLR_BTM·
ನಮ್ಮ ಬೆಂಗಳೂರಿನ ಅತ್ಯಂತ ಕಾರ್ಯನಿರತ ಜಂಕ್ಷನ್‌ಗಳಲ್ಲಿ ಒಂದಾದ ಸಿಲ್ಕ್ ಬೋರ್ಡ್‌ನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಸಿಲ್ಕ್ ಬೋರ್ಡ್ ಜಂಕ್ಷನ್ (ಎಚ್‌ಎಸ್‌ಆರ್ ಲೇಔಟ್ ರ‍್ಯಾಂಪ್) ನಿಂದ ರಾಗಿಗುಡ್ಡ ಜಂಕ್ಷನ್ ವರೆಗಿನ 5.12 ಕಿಮೀ ಉದ್ದದ ‘ಡಬಲ್ ಡೆಕ್ಕರ್ ರೈಲ್-ಕಮ್-ರೋಡ್’ ಫ್ಲೈಓವರ್‌ನ್ನು (ಭಾಗ 2) ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಯಿತು. ಈ ಐತಿಹಾಸಿಕ ಕ್ಷಣಕ್ಕೆ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್, ಮಾಜಿ ಶಾಸಕಿ ಶ್ರೀಮತಿ ಸೌಮ್ಯ ರೆಡ್ಡಿ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ, ಶಾಸಕರಾದ ಶ್ರೀ ಸತೀಶ್ ರೆಡ್ಡಿ, ಮಾಜಿ ಮಹಾಪೌರರಾದ ಶ್ರೀ ಬಿ.ಎನ್. ಮಂಜುನಾಥ ರೆಡ್ಡಿ, ಶ್ರೀ ಉಮಾಪತಿ ಶ್ರೀನಿವಾಸ್ ಗೌಡ ಸೇರಿದಂತೆ ಹಲವು ಪ್ರಮುಖರು, ಅಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಸಾಕ್ಷಿಯಾದರು. #Silkboard #RamalingaReddy #DoubleDeckerFlyover #BTMLayout #Bengaluru #HSRLayout
Ramalinga Reddy tweet mediaRamalinga Reddy tweet mediaRamalinga Reddy tweet mediaRamalinga Reddy tweet media
ಕನ್ನಡ
7
6
117
6.2K
Ramalinga Reddy
Ramalinga Reddy@RLR_BTM·
ಬೆಂಗಳೂರಿನ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ಬನಶಂಕರಿ ಜಂಕ್ಷನ್‌ನಲ್ಲಿ ಪಾದಚಾರಿಗಳ ಸುರಕ್ಷತೆ ಮತ್ತು ವಾಹನ ಸಂಚಾರದ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೊಸ ಸ್ಕೈವಾಕ್‌ (Skywalk) ನಿರ್ಮಾಣ ಕಾಮಗಾರಿಗೆ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರೊಂದಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಸಾರ್ವಜನಿಕರ ದೈನಂದಿನ ಸಂಚಾರದ ತೊಂದರೆಯನ್ನು ಮನಗಂಡು ನಮ್ಮ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತಿದೆ. ಈ ಸಂದರ್ಭದಲ್ಲಿ ಶ್ರೀ ಆರ್. ಅಶೋಕ್, ಶ್ರೀ ತೇಜಸ್ವಿ ಸೂರ್ಯ, ಶ್ರೀ ಸತೀಶ್ ರೆಡ್ಡಿ, ಶ್ರೀಮತಿ ಸೌಮ್ಯ ರೆಡ್ಡಿ, ಶ್ರೀ ರಾಮಮೂರ್ತಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಜನರ ಹಿತವೇ ನಮ್ಮ ಆದ್ಯತೆ. ಹಂತ ಹಂತವಾಗಿ ಬೆಂಗಳೂರಿನ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ನಾವು ಬದ್ಧರಾಗಿದ್ದೇವೆ. #Banashankari #SkyWalk #RamalingaReddy #BengaluruDevelopment #Infrastructure #NammaBengaluru #PublicSafety #CongressGovernment
Ramalinga Reddy tweet mediaRamalinga Reddy tweet mediaRamalinga Reddy tweet media
ಕನ್ನಡ
0
1
17
770
Ramalinga Reddy
Ramalinga Reddy@RLR_BTM·
ನಿಮ್ಮ ಬೆವರಿನ ಹನಿಗಳು ದೇಶದ ಪ್ರಗತಿಯ ಇಂಧನವಾಗಲಿ. ದೇಶವನ್ನು ಬೆಳಗುವ ಎಲ್ಲಾ ಶ್ರಮಜೀವಿಗಳಿಗೆ ಕಾರ್ಮಿಕ ದಿನಾಚರಣೆಯ ಹಾರ್ದಿಕ ಶುಭಾಶಯಗಳು. #RamalingaReddy #LabourDay
Ramalinga Reddy tweet media
ಕನ್ನಡ
2
2
16
403
Ramalinga Reddy
Ramalinga Reddy@RLR_BTM·
ಶ್ರೀ @RAshokaBJP ‌ ರವರೇ, ತಮಗೆ ತಮ್ಮ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳು ಉತ್ತುಂಗದ ಅಭಿವೃದ್ಧಿಯಲ್ಲಿದ್ದವು ಎಂಬ ಭ್ರಮೆಯಿಂದ ಹೊರಬನ್ನಿ. 🔺ತಾವು ಸಾರಿಗೆ ಮಂತ್ರಿಗಳಾಗಿದ್ದಾಗಲೇ ಮೊದಲ ಬಾರಿಗೆ ವೇತನ ಪರಿಷ್ಕರಣೆಗಾಗಿ ಮುಷ್ಕರ ಹೂಡುವ ಪದ್ಧತಿಗೆ ಅಡಿಪಾಯ ಹಾಕಿದ್ದು ತಾವು ಎಂಬುದು ತಿಳಿದಿದೆಯೇ? (ಮುಷ್ಕರದ ದಿನಾಂಕ: 13-09-2012 ಮತ್ತು 14-09-2012 ) 🔺 ತಮ್ಮದೇ ಬಿ.ಜೆ.ಪಿ ಪಕ್ಷದ ಆಡಳಿತ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳ‌ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ ಕಾಲ‌ ಮುಷ್ಕರ ಮಾಡಿಸಿರುವ ಕೀರ್ತಿ ನಿಮಗೆ ಸಲ್ಲಬೇಕು. ನಿಮ್ಮ ಅವಧಿಯಲ್ಲಿ ಎರಡೆರಡು ಬಾರಿ‌ ಮುಷ್ಕರ ನಡೆದದ್ದು ಮರೆತು‌ಬಿಟ್ಟೀರಾ? (ಮುಷ್ಕರದ ದಿನಾಂಕ: 11-12-2020 ರಿಂದ 14-12-2020 ( ನಾಲ್ಕು ದಿವಸ) ಮತ್ತು 07-04-2021 ರಿಂದ 21-04-2021 ( ಹದಿನೈದು ದಿವಸ). ಮುಷ್ಕರದ ಹೆಸರಿನಲ್ಲಿ ಸರಿಸುಮಾರು 3500 ನೌಕರರನ್ನು‌ ಕೆಲಸದಿಂದ ವಜಾ, ಅಮಾನತು ಮಾಡಿ FIR ಹಾಕಿಸಿ,‌ ಇಂದಿಗೂ ಅವರು ಕೋರ್ಟ್ ಕಛೇರಿ ಅಲೆಯುತ್ತಿದ್ದಾರೆ. ಈಗ ಸಾರಿಗೆ ನೌಕರರ ಬಗ್ಗೆ ಅನುಕಂಪದ ಮಾತನ್ನು ಆಡಲು ಯಾವ ನೈತಿಕತೆ ಇದೆ. 🔺 ತಮ್ಮದೇ ಬಿ.ಜೆ.ಪಿ ಸರ್ಕಾರವಿದ್ದಾಗ ಮಾರ್ಚಿ-2023 ರಲ್ಲಿ ಸಾರಿಗೆ ಸಂಸ್ಥೆಗಳ ನೌಕರರ ವೇತನ ಪರಿಷ್ಕರಣೆ ಮಾಡಿ, 38 ತಿಂಗಳ ಹಿಂಬಾಕಿ ವೇತನ ಪಾವತಿ ಬಾಕಿಯಿಟ್ಟು, ಈ ಸಂಬಂಧ ಬಜೆಟ್‌ನಲ್ಲಿ ಯಾವುದೇ ಅನುದಾನವನ್ನು ಮೀಸಲಿಡದೆ ತಪ್ಪಾದ ಸರ್ಕಾರಿ ಆದೇಶ ಹೊರಡಿಸಿರುವುದೇ ಈ ಎಲ್ಲಾ ತೊಡಕುಗಳಿಗೆ ಮೂಲ ಕಾರಣವಾಗಿದೆ. 🔺 ತಮ್ಮ ಬಿ.ಜೆ.ಪಿ ಆಡಳಿತ ಅವಧಿಯಲ್ಲಿ ನೀಡಬೇಕಾಗಿದ್ದ ನಿವೃತ್ತ ನೌಕರರ ವೇತನ ಪರಿಷ್ಕರಣೆ ಉಪಧನ ಬಾಕಿ ಮೊತ್ತ ರೂ.224 ಕೋಟಿ ಗಳಿಗೂ ಸಹ ಯಾವುದೇ ಅನುದಾನವನ್ನು ಮೀಸಲಿಡದೆ ಇದ್ದಾಗ್ಯೂ ಸಹ ನಮ್ಮ ಸರ್ಕಾರವು 2025 ರಲ್ಲಿ ಹಣ ಬಿಡುಗಡೆಗೊಳಿಸಿದೆ. 🔺 ನಾಲ್ಕು ಸಾರಿಗೆ ಸಂಸ್ಥೆಗಳ ಬಾಕಿ ಹೊಣೆಗಾರಿಕೆ 31.03.2026 ರಂತೆ ರೂ. 7130.80 ಕೋಟಿ (ಇದರಲ್ಲಿ ರೂ. 2298.20 ಕೋಟಿ ನೌಕರರ ಭವಿಷ್ಯ ನಿಧಿ ಬಾಕಿ ಮತ್ತು ರೂ.822.26 ಕೋಟಿ ಇಂಧನ ಪಾವತಿ ಬಾಕಿ) 🔺ತಮ್ಮ ಬಿ.ಜಿ.ಪಿ ಆಡಳಿತ ಅವಧಿಯ ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್‌ ಬಾಕಿ ಹಣ ಪಾವತಿಗಾಗಿ, 2025ರಲ್ಲಿ ನಮ್ಮ ಸರ್ಕಾರವು ಬ್ಯಾಂಕ್‌ನಿಂದ ರೂ.2000 ಕೋಟಿ ಸಾಲವನ್ನು ಪಡೆಯಲು ಸಾರಿಗೆ ಸಂಸ್ಥೆಗಳಿಗೆ ಅನುಮತಿಸಿದ್ದು, ಈ ಸಾಲದ ಅಸಲು ಮತ್ತು ಬಡ್ಡಿಯನ್ನು ನಮ್ಮ ಸರ್ಕಾರವು ಪಾವತಿಸುತ್ತಿದೆ. 🔺ಪ್ರತಿ ವರ್ಷ ನಾಲ್ಕು ಸಾರಿಗೆ ಸಂಸ್ಥೆಗಳು ಗಳಿಸುವ ಒಟ್ಟು ಆದಾಯದಲ್ಲಿ 49.15 % ಸಿಬ್ಬಂದಿ ವೆಚ್ಚ (ಅಂದರೆ ರೂ.6759.68 ಕೋಟಿ) ಮತ್ತು 34.49% ಡೀಸೆಲ್‌ ವೆಚ್ಚ ( ಅಂದರೆ ರೂ.4744.41 ಕೋಟಿ) ವೆಚ್ಚವಾಗುತ್ತಿದೆ. 🔺ಕಾರ್ಮಿಕ ಸಂಘಟನೆಗಳ ಬೇಡಿಕೆಗೆ ಸ್ಪಂದಿಸುವ ನಿಟ್ಟಿನಲ್ಲಿ ನಾವು ಅವರೊಡನೆ ಹಲವಾರು ಸಭೆಗಳನ್ನು ನಡೆಸಿದ್ದೇವೆ. ಅವರ ಬೇಡಿಕೆಯಂತೆ 25% ವೇತನ ಪರಿಷ್ಕರಣೆ ಮಾಡಿದಲ್ಲಿ, ಪ್ರತಿ ತಿಂಗಳು ನಾಲ್ಕು ಸಾರಿಗೆ ಸಂಸ್ಥೆಗಳಿಗೆ ರೂ.131.52 ಕೋಟಿ, ವಾರ್ಷಿಕ ರೂ.1578.18 ಕೋಟಿ ಹಾಗೂ ನಾಲ್ಕು ವರ್ಷಗಳಿಗೆ ರೂ.6312.23 ಕೋಟಿ ಹೆಚ್ಚುವರಿ ಹಣ ಭರಿಸಬೇಕಾಗುತ್ತದೆ. 🔺ತಾವು ರಾಜ್ಯದ ಉಪಮುಖ್ಯಮಂತ್ರಿಗಳಾಗಿ, ಸಾರಿಗೆ ಸಚಿವರಾಗಿ ಕೆಲಸ ಮಾಡಿರುವವರು, ಇಷ್ಟಾದರೂ ತಮಗೆ ತಿಳಿಯಬಾರದೇ? ಸಾರಿಗೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿ ತೀವ್ರ ಕಿಷ್ಲಕರವಾಗಿದ್ದು, ಏಪ್ರಿಲ್‌ 1 ,2025 ರಿಂದಲೇ ಅನ್ವವಾಗುವಂತೆ 25% ವೇತನ ಹೆಚ್ಚಳ ಮಾಡಿದ್ದಲ್ಲಿ, ವಾರ್ಷಿಕ ರೂ.1578.18 ಕೋಟಿ ಹಾಗೂ ನಾಲ್ಕು ವರ್ಷಗಳಿಗೆ ರೂ.6312.23 ಕೋಟಿ ಹೆಚ್ಚುವರಿ ಹಣ ಭರಿಸಬೇಕಾಗುತ್ತದೆ. ಇಷ್ಟೊಂದು ಮೊತ್ತದ ಹಣವನ್ನು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ಬಾರದೇ, ಅವರೊಡನೆ ಚರ್ಚಿಸದೆ, ಅನುಮತಿ ಪಡೆಯದೇ, ಏಕಾಏಕಿ ನಾನು ಘೋಷಿಸಲು ಸಾಧ್ಯವೇ? 🔺 ಇದೇ ವಿಷಯವನ್ನೇ ನನ್ನ ಅಧ್ಯಕ್ಷತೆಯಲ್ಲಿ ಕಾರ್ಮಿಕ ಮುಖಂಡರುಗಳೊಡನೆ ನಡೆದ ನೆನ್ನೆಯ ಸಭೆಯಲ್ಲಿ ತಿಳಿಸಿದ್ದೇನೆ. ಇನ್ನೆರಡು ಮೂರು ದಿನಗಳಲ್ಲಿ ಎಷ್ಟು ಶೇಕಡವಾರು ವೇತನ ಹೆಚ್ಚಳ ನೀಡುತ್ತೇವೆ ಎಂಬುದನ್ನು ಮಾನ್ಯ ಮುಖ್ಯಮಂತ್ರಿಗಳೊಡನೆ ಚರ್ಚಿಸಿ, ತೀರ್ಮಾನಿಸಿ ಕೂಡಲೇ ತಿಳಿಸಲಾಗುವುದು ಎಂದು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾಗ್ಯೂ ಸಹ, ಅವರು ಮುಷ್ಕರ ಮಾಡುತ್ತೇವೆ ಅಂದರೆ ಅದಕ್ಕೆ ಅವರೇ ಹೊಣೆ. #RamalingaReddy #RAshoka #KSRTC #BMTC #KKRTC #NWKRTC #Karnataka #Congress #BJP @INCKarnataka
Ramalinga Reddy tweet mediaRamalinga Reddy tweet media
R. Ashoka@RAshokaBJP

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಷ್ಕರ, ‌ಪ್ರತಿಭಟನೆಗಳು ಸಾಮಾನ್ಯವಾಗಿದೆ. @INCKarnataka ಸರ್ಕಾರದ ಆಡಳಿತಕ್ಕೆ ರಾಜ್ಯವೇ ರೋಸಿ ಹೋಗಿದೆ. ಅಡಿಗಡಿಗೆ ಪ್ರತಿಭಟನೆ, ಮುಷ್ಕರ ನಡೆಯುತ್ತಿದೆ. ಕಾಂಗ್ರೆಸ್ ಜಾರಿಗೊಳಿಸಿರುವ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆ ಶಕ್ತಿಯಿಂದಾಗಿ ಸಾರಿಗೆ ಇಲಾಖೆಯ ನೌಕರರು ಹೈರಾಣಾಗಿದ್ದಾರೆ. ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ. ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಯ ಶಕ್ತಿ ಕುಂದಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಏಳಿಗೆಯ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತವನ್ನು ಸರ್ಕಾರ ತಲುಪಿರುವುದು ದುರಂತವೇ ಸರಿ. ಸರ್ಕಾರದ ಬೇಜವಾಬ್ದಾರಿ ನಡೆಯಿಂದ‌ ಆಕ್ರೋಶಗೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರ ನಡೆಸಲು ನಿರ್ಧರಿಸಿದೆ. ತಮ್ಮ ಬೇಡಿಕೆ ಈಡೇರದಿದ್ದರೆ ಮೇ 20ರ ನಂತರ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಸಾರಿಗೆ ನೌಕರರು ತಿಳಿಸಿದ್ದಾರೆ. ಮುಖ್ಯಮಂತ್ರಿ @siddaramaiah ಸರ್ಕಾರದ ತುಘಲತ್ ಆಡಳಿತದಿಂದಾಗಿ ರಾಜ್ಯದ ಜನತೆ ಮತ್ತೊಮ್ಮೆ ಸಂಕಷ್ಟಕ್ಕೆ ಒಳಗಾಗಲಿದ್ದಾರೆ. #CongressFailsKarnataka

ಕನ್ನಡ
1
8
32
1.9K
Ramalinga Reddy
Ramalinga Reddy@RLR_BTM·
ಕೆ.ಆರ್. ಪುರಂ ವಿಧಾನಸಭಾ ಕ್ಷೇತ್ರದ ಚಳ್ಳಕೆರೆಯಲ್ಲಿಂದು ಹಿರಿಯ ನಾಯಕ ಶ್ರೀ ಕೇಶವ ಅವರ ನೇತೃತ್ವದಲ್ಲಿ ಬಿಜೆಪಿ ತೊರೆದು ನೂರಾರು ಬೆಂಬಲಿಗರು ಅಧಿಕೃತವಾಗಿ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೆ.ಆರ್. ಪುರಂ ಕ್ಷೇತ್ರದ ಮುಖಂಡರಾದ ಶ್ರೀ ಮೋಹನ್, ಪ್ರೊ. ರಾಜೀವ್ ಗೌಡ ಹಾಗೂ ಕ್ಷೇತ್ರದ ಇತರ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಜನರ ಸೇವೆ ಮಾಡಲು ಮತ್ತು ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಲು ಮುಂದಾಗಿರುವ ಎಲ್ಲರಿಗೂ ಅಭಿನಂದನೆಗಳು. #KRPuramCongress #RamalingaReddy
Ramalinga Reddy tweet mediaRamalinga Reddy tweet mediaRamalinga Reddy tweet media
ಕನ್ನಡ
1
1
25
1.2K
Ramalinga Reddy
Ramalinga Reddy@RLR_BTM·
ಕರ್ನಾಟಕ ರಾಜ್ಯ ಕುಂಬಾರರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಡಾ. ಶ್ರೀನಿವಾಸನ್‌ ವೇಲು ಅವರಿಗೆ ಹಾರ್ದಿಕ ಶುಭಾಶಯಗಳು. ನಿಮ್ಮ ಆಡಳಿತಾವಧಿಯಲ್ಲಿ ಕುಂಬಾರ ಸಮುದಾಯವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢವಾಗಲಿ ಎಂದು ಹಾರೈಸುತ್ತೇನೆ. #RamalingaReddy
Ramalinga Reddy tweet media
ಕನ್ನಡ
2
3
20
794