ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಕಾರ್ಯದರ್ಶಿಗಳ ಉಪಸ್ಥಿತಿಯಲ್ಲಿ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.
ಭಾರತ ಸರ್ಕಾರದ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕರ ಕುಂದು ಕೊರತೆಗಳ ಇಲಾಖೆ ಆದೇಶದಂತೆ ದಿನಾಂಕ: 23/12/2025 ಮಂಗಳವಾರದಂದು ಮಧ್ಯಾಹ್ನ 3:30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣ, ಕೋಲಾರ ಇಲ್ಲಿ “ಸುಶಾಸನ ಸಪ್ತಾಹ-ಪ್ರಶಾಸನ ಗ್ರಾಮಗಳ ಕಡೆಗೆ" (Sushasan Saptah – Prashasan Gaon Ki Ore ) ಎಂಬ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಮುಳಬಾಗಿಲು ತಾಲ್ಲೂಕು ತಾಯಲೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಸ್ವಚ್ಛತೆ, ಔಷಧಿಗಳ ಹಾಗೂ ವೈದ್ಯರ ಚಿಕಿತ್ಸಾ ಕ್ರಮಗಳ ಬಗ್ಗೆ ಪರಿಶೀಲಿಸಿ, ರೋಗಿಗಳ ಕುಂದುಕೊರತೆ ಬಗ್ಗೆ ವಿಚಾರಿಸಲಾಯಿತು.
ಶ್ರೀನಿವಾಸಪುರ ತಾಲ್ಲೂಕು ನಕ್ಕಲಗಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲೆಯಲ್ಲಿನ ಶಿಕ್ಷಕರ ಭೋದನೆ, ಸ್ವಚ್ಚತೆ ಕುರಿತು ಪರಿಶೀಲಿಸಿ, ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಬಿಸಿ ಊಟ ಹಾಗೂ ಪಾಠ, ಕಲಿಕೆ , ವಿದ್ಯಾಭ್ಯಾಸ ಕುರಿತು ಚರ್ಚಿಸಲಾಯಿತು.
ಶ್ರೀನಿವಾಸಪುರ ತಾಲ್ಲೂಕು ಗೌನಿಪಲ್ಲಿ ಹೋಬಳಿ ಬೈರಗಾನಹಳ್ಳಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಸ್ವಚ್ಛತೆ, ಔಷಧಿಗಳ ಹಾಗೂ ವೈದ್ಯರ ಚಿಕಿತ್ಸಾ ಕ್ರಮಗಳ ಬಗ್ಗೆ ಪರಿಶೀಲಿಸಿ, ರೋಗಿಗಳ ಕುಂದುಕೊರತೆ ಬಗ್ಗೆ ವಿಚಾರಿಸಲಾಯಿತು.