

ಭ್ರಷ್ಟ @INCKarnataka ಸರ್ಕಾರದ ದುರಾಡಳಿತದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಅತ್ಯಾಚಾರಿಗಳ ಅಟ್ಟಹಾಸ ಮಿತಿ ಮೀರಿದೆ.. ಮೊನ್ನೆಯಷ್ಟೆ ಬೆಂಗಳೂರಿನ ಹೆಚ್ಎಸ್ ಆರ್ ಬಡಾವಣೆಯಲ್ಲಿ ಯುವತಿಯ ಅತ್ಯಾಚಾರ ನಡೆದಿತ್ತು. ಆ ಹೇಯ ಘಟನೆ ಮಾಸುವ ಮುನ್ನವೇ ಉಡುಪಿ ಜಿಲ್ಲೆಯ ಕಾರ್ಕಳದಲ್ಲೂ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, @siddaramaiah ಸರ್ಕಾರದ ಅರಾಜಕತೆಗೆ ಸಾಕ್ಷಿಯಾಗಿದ್ದು, ಮಹಿಳೆಯರು, ಮಕ್ಕಳಿಗೆ ರಕ್ಷಣೆ ಇಲ್ಲ ಎನ್ನುವುದನ್ನು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಉಡುಪಿ ಎಸ್ಪಿಗೆ ಸಂತ್ರಸ್ತೆ ಹೇಳಿಕೆ ನೀಡಿದ್ದು, ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಮೂವರು ಕಾಮುಕರು ಗ್ಯಾಗ್ ರೇಪ್ ಮಾಡಿರುವ ಪೈಶಾಚಿಕ ಕೃತ್ಯ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಸರ್ಕಾರದ ಭ್ರಷ್ಟಾಚಾರಗಳನ್ನು ಮುಚ್ಚಿಹಾಕಲು ಪೂರ್ಣ ಪ್ರಮಾಣದಲ್ಲಿ ತೊಡಗಿರುವ ಮುಖ್ಯಮಂತ್ರಿಗಳು ಹಾಗೂ ಮಂತ್ರಿ ಮಂಡಲಕ್ಕೆ ರಾಜ್ಯದ ಜನರ ಸುರಕ್ಷತೆಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ.. ಅತ್ಯಾಚಾರ, ಕೊಲೆ, ದರೋಡೆ ಪ್ರಕರಣಗಳು ಎಲ್ಲೆ ಮೀರಿದೆ.. @DrParameshwara ಅವರೊಬ್ಬ ಅಸಮರ್ಥ ಗೃಹ ಸಚಿವ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ.






















